ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ 78 ನೇ ಜಯಂತ್ಯೋತ್ಸವ ಹಿನ್ನಲೆ – ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ

0

ಪುತ್ತೂರು: ಜ.22 ರಂದು ಪುತ್ತೂರಿನಲ್ಲಿ ನಡೆಯಲಿರುವ ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ 78 ನೇ ಜಯಂತ್ಯೋತ್ಸವ, ಶ್ರೀ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿ 10 ವರ್ಷ ಪೂರೈಸಿದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಶಮಾನೋತ್ಸವ, ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ರಚಿಸಿದ ಡಾ.ಬಾಲಗಂಗಾಧರನಾಥ ಶ್ರೀಗಳ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಿದರು.

ಜಂಯತ್ಯೋತ್ಸವ ಸಂಸ್ಮರಣೆ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು, ಆರ್ಥಿಕ ಸಮಿತಿ ಸಂಚಾಲಕ ಎಂ ಪಿ ಉಮೇಶ್ ಬೆಳ್ಳಾರೆ, ಯು.ಪಿ ರಾಮಕೃಷ್ಣ ಗೌಡ ಅವರು ಆಮಂತ್ರಣ ನೀಡಿದರು.

LEAVE A REPLY

Please enter your comment!
Please enter your name here