ಪುತ್ತೂರು ಸ್ವಾಮಿ ವಿವೇಕಾನಂದರ ಜಯಂತಿ ಯುವ ಸಪ್ತಾಹ ವಿವೇಕ ರಥ – ಯುವ ಪಥ, ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ

0

ಪುತ್ತೂರು: ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ಜಿಲ್ಲಾಡಳಿತ, ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲ್ಲೂಕು ಯುವಜನ ಒಕ್ಕೂಟದ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ ಯುವ ಸಪ್ತಾಹ ವಿವೇಕ ರಥ-ಯುವ ಪಥ ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರು ಉದ್ಘಾಟಿಸಿದರು.

ವೇದಿಕೆಯಲ್ಲಿ ನಗರಸಭಾ ಸದಸ್ಯ ಜಗನ್ನಿವಾಸ ರಾವ್, ನಿವೃತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಶಿಕ್ಷಕ ರಮೇಶ್ ಉಳಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೃಷ್ಣ ಭಟ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್ ಉಪಸ್ಥಿತರಿದ್ದರು.

ಯುವಸಬಲೀಕರಣ ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಸ್ವಾಗತಿಸಿ, ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಮೀದ್ ಸಾಜ ವಂದಿಸಿದರು. ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here