ಸ್ವಾಮಿ ವಿವೇಕಾನಂದರ ಜಯಂತಿ ಯುವ ಸಪ್ತಾಹ ವಿವೇಕ ರಥ-ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ

0

ಪುತ್ತೂರು: ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ದ.ಕ.ಜಿ .ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾದ್ಯಂತ ಸಂಚರಿಸುವ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾಕ್ಕೆ ಪುತ್ತೂರಿನ ಕಬಕದಲ್ಲಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ವತಿಯಿಂದ ಸ್ವಾಗತಿಸಲಾಯಿತು.

ಕಬಕ ಗ್ರಾ.ಪಂ.ಅಧ್ಯಕ್ಷ ವಿನಯ ಕುಮಾರ್ ಅವರು ಹಾರಾರ್ಪಾಣೆ ಮಾಡುವ ಮೂಲಕ ಸ್ವಾಗತಿಸಿದರು.

ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ, ತಾಲೂಕು ಅಧ್ಯಕ್ಷ ದಿನೇಶ್ ಸಾಲಿಯಾನ್, ಕಾರ್ಯದರ್ಶಿ ಹಮೀದ್ ಸಾಜ, ನರಿಮೊಗರು ಗ್ರಾ.ಪಂ.ಉಪಾಧ್ಯಕ್ಷ ಸುಧಾಕರ ಕುಲಾಲ್, ನೋಡಲ್ ಅಧಿಕಾರಿ ಮಾಮಚ್ಚನ್ ಎಂ.,ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಚೆನ್ನಾವರ, ಗೌತಮ್ ಕರುಂಬಾರು, ಸವಣೂರು ಯುವಕ ಮಂಡಲ್ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು ಮೊದಲಾದವರು ಉಪಸ್ಥಿತರಿದ್ದರು.

ಸವಣೂರು ಯುವಕ ಮಂಡಲದ ನಾಸಿಕ್ ಬ್ಯಾಂಡ್ ವಿವೇಕ ರಥ ಮೆರವಣಿಗೆಗೆ ಮೆರುಗು ನೀಡಿತ್ತು.

LEAVE A REPLY

Please enter your comment!
Please enter your name here