ಗೋಳಿತ್ತೊಟ್ಟು: ಯಾರೂ ಇಲ್ಲದ ವೇಳೆ ಚಿನ್ನಕ್ಕೆ ಕನ್ನ ಹಾಕಿದ ಕಳ್ಳರು

0

ನೆಲ್ಯಾಡಿ : ಗೋಳಿತ್ತೊಟ್ಟು ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿರುವ ಘಟನೆ ನಡೆದಿದೆ.


ಸ್ಕರಿಯ ಅವರು ಪ್ರಕ್ರತಿ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ ಸಹ ಉಜಿರೆ ಆಸ್ಪತ್ರೆಗೆ ತೆರಳಿದ್ದರು. ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ. ಕಳವು ಪ್ರಕರಣ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ರವಿ ಬಿ ಎಸ್, ಉಪ್ಪಿನಂಗಡಿ ಎಸ್ ಐ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here