ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್‌ಗೆ ಡಾಕ್ಟರೇಟ್ ಪದವಿ

0

 

ಪುತ್ತೂರು: ಬೆಂಗಳೂರಿನ ಅಲಯನ್ಸ್ ಯೂನಿವರ್ಸಿಟಿಯ ವಾರ್ಷಿಕ ಘಟಿಕೋತ್ಸವದಲ್ಲಿ ಹಿರಿಯ ವಕೀಲರಾದ ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಎಂ.ರವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.
ಕಾನೂನಿನ ವಿಷಯದಲ್ಲಿ ಅಧ್ಯಯನ ಮಾಡಿ ಸಲ್ಲಿಸಿದ್ದ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಅರುಣ್‌ಶ್ಯಾಮ್‌ರವರನ್ನು ಪುರಸ್ಕರಿಸಲಾಯಿತು. ಕಾರ್ಯ್ರಮದಲ್ಲಿ ಕರ್ನಾಟಕ ಕಾನೂನು ಆಯೋಗದ ಮುಖ್ಯಸ್ಥರಾದ ಕೇರಳ ಉಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಸ್. ಆರ್. ಬನ್ನೂರಮಠ, ಸಚಿವ ಸಿ. ಎನ್. ಅಶ್ವತ್ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು. ಮೂಲತ: ಕೊಳ್ನಾಡು ಗ್ರಾಮದ ಪಂಜಿಗದ್ದೆ ನಿವಾಸಿ ಆಗಿರುವ ಅರುಣ್ ಶ್ಯಾಮ್ ಅವರು ೨೦೦೬ರಲ್ಲಿ ಪುತ್ತೂರಿನ ಈಶ್ವರಮಂಗಲ ನಿವಾಸಿ ಕೆ.ಎಂ. ನಟರಾಜ್ ಅವರ ಜೊತೆ ಬೆಂಗಳೂರು ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಮುಂದೆ ಸ್ವಂತ ಕಚೇರಿ ಆರಂಭಿಸಿ ವಕೀಲಿ ವೃತ್ತಿ ಮುಂದುವರಿಸಿದ್ದರು. ವಿಟ್ಲ ಮಾದಕಟ್ಟೆ ಹಿ.ಪ್ರಾ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡ ಅರುಣ್‌ಶ್ಯಾಮ್ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಬಳಿಕ ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜಿನಲ್ಲಿ ಎಲ್‌ಎಲ್‌ಎಂ ಪದವಿ ಪಡೆದರು. ಇದರ ಜೊತೆಗೆ ಶಿವಮೊಗ್ಗದಲ್ಲಿ ಎಂ.ಆರ್. ಸತ್ಯನಾರಾಯಣ ಅವರ ಜೊತೆ ವಕೀಲಿ ವೃತ್ತಿ ಮಾಡಿದ್ದರು. ಬಳಿಕ ೨೦೦೬ರಲ್ಲಿ ಬೆಂಗಳೂರಿನತ್ತ ಚಿತ್ತ ಹರಿಸಿದರು. ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅರುಣ್‌ಶ್ಯಾಮ್ ಅವರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಂ. ಈಶ್ವರ ಭಟ್ ಮತ್ತು ಕುಸುಮ ಈಶ್ವರ ಭಟ್‌ರವರ ಪುತ್ರರಾದ ಅರುಣ್‌ಶ್ಯಾಮ್ ಪ್ರಸ್ತುತ ಪತ್ನಿ ಸುಷ್ಮಾ ಅರುಣ್ ಶ್ಯಾಮ್. ಮಕ್ಕಳು ಆದ್ಯಶ್ರೀ ಹಾಗೂ ಅಮೃತಶ್ರೀಯವರೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದಾರೆ.

LEAVE A REPLY

Please enter your comment!
Please enter your name here