ವಿವೇಕ ರಥ ಯುವ ಪಥ – ಯುವ ಜಾಗೃತಿ ಜಾಥಾಕ್ಕೆ ಭಕ್ತಕೋಡಿಯಲ್ಲಿ ಸ್ವಾಗತ

0

ಸವಣೂರು :  ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ದ.ಕ. ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ನೇತೃತ್ವದಲ್ಲಿ ಜಿಲ್ಲಾದ್ಯಂತ ಸಂಚರಿಸುವ ವಿವೇಕ ರಥ ಯುವ ಪಥ – ಯುವ ಜಾಗೃತಿ ಜಾಥಾಕ್ಕೆ ಭಕ್ತಕೋಡಿಯಲ್ಲಿ ಎಸ್.ಜಿ.ಎಂ ಪ್ರೌಢಶಾಲೆಯ ಮುಖ್ಯ ಗುರು  ಜಯಶ್ರೀ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್ ರಾಜ್ ಕರುಂಬಾರು, ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಎಸ್.ಜಿ.ಎಂ ಪ್ರೌಢಶಾಲೆಯ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಅಶೋಕ್ ಎಸ್.ಡಿ, ಯುವಕ ಮಂಡಲದ ಕಾರ್ಯಕಾರಿ ಸಮಿತಿಯ ಸದಸ್ಯ ತಿಲಕ್ ರಾಜ್ ಕರುಂಬಾರು, ಯುವಕ ಮಂಡಲದ ಸದಸ್ಯ ಲಕ್ಷಣ್ ಆಚಾರ್ಯ, ಗೌತಮ್ ಪಟ್ಟೆಮಜಲು, ದ.ಕ. ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.
ಶಾಲಾ ಮಕ್ಕಳು, ಶಿಕ್ಷಕ ವೃಂದ ಹಾಗೂ ಯುವಕ ಮಂಡಲದ ಸದಸ್ಯರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು ಗೌರವ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here