ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ :ಮಾ.5 – ಮಾ.9 ಕ್ಷೇತ್ರದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಅಂಜನೇಯ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ಮಾ.5ರಿಂದ ಮಾ.9ರ ವರೆಗೆ ನಡೆಯಲಿರುವ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜ.17 ರಂದು ಬೆಳಗ್ಗೆ ಶ್ರೀಕ್ಷೇತ್ರದಲ್ಲಿ ಚಪ್ಪರ ಮೂಹೂರ್ತ ನಡೆಯಿತು. ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿರವರು ವಿಧಿವಿಧಾನ ನೆರವೇರಿಸಿದರು‌.


ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಕಾರಾಜೆ, ಪ್ರಧಾನ ಕಾರ್ಯದರ್ಶಿ ಶ್ರೀಧರ ಬಾಳೆಕಲ್ಲು, ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ತಾರಿದಳ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಗೀತಪ್ರಕಾಶ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಸಣ್ಣಗುತ್ತು ಅಳಿಕೆ, ಕೊಶಾಧಿಕಾರಿ ಕೃಷ್ಣಪ್ಪ ಪೂಜಾರಿ ಎಂ. ಕುಕ್ಕಾಜೆ, ಕಾರ್ಯಾಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ, ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎಂ.ಕೆ.ಕುಕ್ಕಾಜೆ, ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ,ವಿಟ್ಲ ಬಿಲ್ಲವ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ನಿಡ್ಯ, ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷರಾದ ಹರೀಶ್ ವಿಟ್ಲ, ಸಂಜೀವ ಪೂಜಾರಿ ಎಂ.ಎಸ್., ಚಂದ್ರಹಾಸ ಸುವರ್ಣ, ಉದಯ ಶೆಟ್ಟಿ ಸಾಯ, ಅಶೋಕ್ ಶೆಟ್ಟಿ ಸಾಯ, ಜಗನ್ನಾಥ ರೈ ಕೆಳಗಿನ ಮನೆ, ಲಕ್ಷ್ಮಣ ಕನ್ನಕಜೆ, ಸದಾಶಿವ ಶೆಟ್ಟಿ ಬಿರ್ಕಾಪು, ಯತೀಶ್ ಆಳ್ವಾ ಎಳ್ನಾಡುಗುತ್ತು, ರವಿ ಎಂ.ಎಸ್.ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here