ಸಿಎ ಬ್ಯಾಂಕ್ ಪಿಗ್ಮಿ ಸಂಗ್ರಾಹಕ ಸೀತಾರಾಮ ಭಟ್ ನಿಧನ

0

ಉಪ್ಪಿನಂಗಡಿ: ಕಳೆದ ಹಲವು ವರ್ಷಗಳಿಂದ ಉಪ್ಪಿನಂಗಡಿಯ ಸಿಎ ಬ್ಯಾಂಕ್‌ನಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಈ ಭಾಗದ ಜನತೆಗೆ ಚಿರಪರಿಚಿತರಾಗಿದ್ದ ಗೇರುಕಟ್ಟೆ ನಿವಾಸಿ ಸೀತಾರಾಮ ಭಟ್ (60) ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


ಸೀತಾರಾಮ ಭಟ್ ಅವರು ಸರಳ- ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರಾಗಿದ್ದು, ಸುಮಾರು 30 ವರ್ಷಗಳಿಂದ ಉಪ್ಪಿನಂಗಡಿಯ ಸಿಎ ಬ್ಯಾಂಕ್‌ನಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೂಡಾ ತನ್ನ ಕೆಲಸ ನಿರ್ವಹಿಸಿ ಮನೆಗೆ ಮರಳಿದವರು ರಾತ್ರಿ ಸುಮಾರು 11ರ ವೇಳೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here