ಮಾಣಿ: ಅಗ್ನಿ ದುರಂತ- ಮನೆ ಆಹುತಿ ಪಡೆದ ಅಗ್ನಿ

0

ವಿಟ್ಲ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೋನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಪಕ್ಕದ ಮನೆಯವರು ಬೆಂಕಿ ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾ. ಘಟನೆಯಿಂದ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್, ವಿದ್ಯುತ್ ಉಪಕರಣಗಳ ಸಹಿತ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ. ಮನೆ ಬೆಂಕಿಗಾಹುತಿಯಾಗಲು ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

 

LEAVE A REPLY

Please enter your comment!
Please enter your name here