ತಡೆರಹಿತ ಸಂಚಾರಕ್ಕಾಗಿ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಕೆ

0

ಪುತ್ತೂರು: ಆಂಬ್ಯುಲೆನ್ಸ್‌ಗಳ ತಡೆ ರಹಿತ ಸಂಚಾರಕ್ಕೆ ಅನುವು ಮಾಡಿಕೊಡಲು ಕರ್ನಾಟಕ ಹೈಕೋರ್ಟ್‌ ಆದೇಶದಂತೆ ರಾಜ್ಯದಲ್ಲಿ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದ್ದು, ಜ.19ರಂದು ಪುತ್ತೂರಿನಲ್ಲಿರುವ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಸಾಧನ ಅಳವಡಿಸುವ ಕಾರ್ಯ ನಡೆದಿದೆ.


ಆಂಬ್ಯುಲೆನ್ಸ್‌ಗಳು ತಡೆ ರಹಿತವಾಗಿ ಸಂಚರಿಸಲು ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು ಎಂದು ನವೆಂಬರ್ 8ರಂದು ಹೈಕೋರ್ಟ್ ಆದೇಶ ನೀಡಿತ್ತು. ಸಂಚರಿಸುವ ಮಾರ್ಗದ ಕುರಿತು ಸಂಚಾರ ದಟ್ಟಣೆ ನಿಯಂತ್ರಣ ಕೊಠಡಿಗೆ ಮಾಹಿತಿಯನ್ನು ಆಂಬ್ಯುಲೆನ್ಸ್‌ಗಳ ಚಾಲಕರು ನೀಡಬೇಕಾಗುತ್ತದೆ. ಪುತ್ತೂರಿನಲ್ಲಿ ಸುಮಾರು 10 ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸುವ ಕಾರ್ಯ ಶ್ರೀ ಮಹಾಲಿಂಗೇಶ್ವರ ದೇವಳದ ಕಂಬಳಗದ್ದೆಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here