ಜ.21: ಆರ್ಯಾಪು ಗ್ರಾ.ಪಂ ಸಭಾಂಗಣದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

0

ಪುತ್ತೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ(ಮೆಸ್ಕಾಂ) ಗ್ರಾಮೀಣ ಉಪ ವಿಭಾಗದ ವತಿಯಿಂದ ಆರ್ಯಾಪು ಗ್ರಾ.ಪಂ ವ್ಯಾಪ್ತಿಯ ಜನಸಂಪರ್ಕ ಸಭೆಯು ಜ.21ರಂದು ಬೆಳಿಗ್ಗೆ 10.30ಕ್ಕೆ ಆರ್ಯಾಪು ಗ್ರಾ.ಪಂನ ನೇತಾಜಿ ಸಭಾಭವನದಲ್ಲಿ ನಡೆಯಲಿದೆ.
ಮೆಸ್ಕಾಂನ ನಿರ್ದೆಶಕ ಕಿಶೋರ್ ಕುಮಾರ್ ಉಪಸ್ಥಿತಿಯಲ್ಲಿ ನಡೆಯಲಿರುವ ಜನಸಂರ್ಕ ಸಭೆಯಲ್ಲಿ ಮೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಚಂದ್ರ ಎ., ಕಿರಿಯ ಅಭಿಯಂತರ ಸುಂದರ್ ಹಾಜರಿರಲಿದ್ದಾರೆ. ಆರ್ಯಾಪು ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಮೆಸ್ಕಾಂಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿದ್ದಲ್ಲಿ ಸಭೆಯಲ್ಲಿ ಪರಿಹರಿಸಿಕೊಡಲಾಗುವುದು. ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here