ಸಮಾಜ ಸೇವೆಗಾಗಿ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇಂಟರ್‌ನ್ಯಾಷನಲ್ ಐಕಾನಿಕ್ ಅವಾರ್ಡ್‌ಗೆ ಆಯ್ಕೆ

0

ಪುತ್ತೂರು: ಅಬುಧಾಬಿಯಲ್ಲಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಮಾಡಿರುವ ಸಮಾಜ ಸೇವೆಗಾಗಿ ‘ಇಂಟರ್‌ನ್ಯಾಷನಲ್ ಐಕಾನಿಕ್ ಅವಾರ್ಡ್-2023’ಕ್ಕೆ ಆಯ್ಕೆಯಾಗಿದ್ದಾರೆ.


ಕಳೆದ ಹಲವು ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ನಿರಂತರ ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಈ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಇಂಟರ್‌ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ನೇತೃತ್ವದಲ್ಲಿ ಬುರ್ ದುಬೈ ಕರಾಮದಲ್ಲಿ ಭಾರತೀಯ ದೂತಾವಾಸ ಸಭಾಂಗಣದಲ್ಲಿ ಜ.21ರಂದು ನಡೆಯಲಿರುವ 36ನೇ ಇಂಟರ್‌ನ್ಯಾಷನಲ್ ಕಲ್ಚರಲ್ ಫೆಸ್ಟ್ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಕನ್ನಡ ಸಾಹಿತ್ಯ ಪೋಷಕರೂ ಆಗಿರುವ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರಿಗೆ 2022ರ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

LEAVE A REPLY

Please enter your comment!
Please enter your name here