ಜ.22: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ತೂರಿಗೆ –  ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮನವಿ

0

ಪುತ್ತೂರು: ಜ.22ರಂದು ಪುತ್ತೂರಿನಲ್ಲಿ ವಿಜ್ರಂಭಣೆಯಿಂದ ನಡೆಯಲಿರುವ ಭೈರವೈಕ್ಯ ಜಗದ್ಗುರು ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಹಾಗೂ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಪ್ರಯುಕ್ತ ನಡೆಯುವ ಒಕ್ಕಲಿಗರ ಬೃಹತ್ ಸಮಾವೇಶಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಒಕ್ಕಲಿಗ ಮುಖಂಡರು ಆಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ.

ಈ ಅಭೂತಪೂರ್ವವಾದ ಕಾರ್ಯಕ್ರಮಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯರವರು ವಿನಂತಿಸಿದ್ದಾರೆ.

ಉಡುಪಿಗೆ ಆಗಮಿಸಲಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಲಿರುವ ಡಿ.ಕೆ.ಶಿವಕುಮಾರರವರು ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿ ತೆರಳಲಿದ್ದಾರೆ ಎಂದು ಧನಂಜಯ ಅಡ್ಪಂಗಾಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here