ತಾ.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬಿಗರ ಚೌಡಯ್ಯ ಜಯಂತಿ

0

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬಿಗರ ಚೌಡಯ್ಯ ಜಯಂತಿಯನ್ನು ಜ.21 ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ಆಚರಿಸಿದರು.

ಸಹಾಯಕ ಆಯುಕ್ತ ಗಿರೀಶ್ ನಂದನ್ ಸಂಸ್ಮರಣಾ ಜ್ಯೋತಿ ಬೆಳಗಿಸಿ, ಜಯಂತಿ ಆಚರಣೆಯ ಮಹತ್ವವನ್ನು ವಿವರಿಸಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾಗಿರುವ ತಹಶೀಲ್ದಾರ್ ನಿಸರ್ಗಪ್ರಿಯ ಜೆ. ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮದಲ್ಲಿ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು. ತಾಲೂಕು ಕಚೇರಿ ಸಿಬಂದಿ ಚೈತ್ರಾ ಡಿ ನಾಯಕ್ ಸ್ವಾಗತಿಸಿದರು. ಭೂ ಮಾಪನಾ ಇಲಾಖೆಯ ಮೇಲ್ವಿಚಾರಕ ಮಹೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

LEAVE A REPLY

Please enter your comment!
Please enter your name here