ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಪ್ರತಿಷ್ಠಾ ವಾರ್ಷಿಕೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ

0

ಕಾಣಿಯೂರು: ಕುದ್ಮಾರು ಗ್ರಾಮದ ಬೇರಿಕೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವವು ಫೆ 25,26ರಂದು ನಡೆಯಲಿದ್ದು, ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಜ,22ರಂದು ಬೇರಿಕೆ ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್.ಕಾರ್ಲಾಡಿ, ಕಾರ್ಯದರ್ಶಿ ರಮೇಶ್ ಕೆ.ಎನ್.ಕಾರ್ಲಾಡಿ, ಕೋಶಾಧಿಕಾರಿ ಕುಂಞಣ್ಣ ನಾಯ್ಕ ಕಾರ್ಲಾಡಿ, ಆಡಳಿತ ಸಮಿತಿ ಅಧ್ಯಕ್ಷರು, ಮೊಕ್ತೇಸರರಾದ ಹರೀಶ್ ಬೇರಿಕೆ, ಉಪಾಧ್ಯಕ್ಷ ರಮೇಶ ಬೇರಿಕೆ, ಕಾರ್ಯದರ್ಶಿ ಕುಸುಮಾಧರ ಕುದ್ಮಾರು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ರಾಶಿ ಕಾಂಪ್ಲೆಕ್ಸ್ ಮಾಲಕ ಚಂದ್ರಶೇಖರ ಬರೆಪ್ಪಾಡಿ, ಉಮೇಶ್ ಕೆರೆನಾರು, ಗೋಪಾಲಕೃಷ್ಣ ಕಾರ್ಲಾಡಿ ಬಾಲಕೃಷ್ಣ ನೂಜಿ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here