ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು:ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ ಹಾಗೂ ಪೂಮಾಣಿ, ಕಿನ್ನಿಮಾಣಿ ದೈವಗಳ ಕದಿಕೆ ಚಾವಡಿಯಲ್ಲಿ ಫೆ.1 -6ರ ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.24ರಂದು ಗೊನೆ ಮುಹೂರ್ತ ನೆರವೇರಿತು.


ದೇವಸ್ಥಾನದಲ್ಲಿ ಪೂಜೆ, ಗಣಪತಿ ಹೋಮ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಗೊನೆ ಮುಹೂರ್ತ ನೆರವೇರಿಸಲಾಯಿತು. ದೇವಸ್ಥಾನದ ಅರ್ಚಕ ಅನಂತರಾಮ ಮಡಕುಳ್ಳಾಯ ಗೊನೆ ಮುಹೂರ್ತ ನೆರವೇರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ರಾಧಾಕೃಷ್ಣ ರೈ ಆನಾಜೆ, ದೇವಪ್ಪ ನಾಯ್ಕ ಉಪ್ಪಳಿಗೆ, ಗಣೇಶ ಭಟ್, ಭಾರತಿ ಉಪ್ಪಳಿಗೆ, ಮಾಜಿ ಅಧ್ಯಕ್ಷ ವಿಠಲ ರೈ ಬಾಲ್ಯೊಟ್ಟುಗುತ್ತು, ಶಾರದೋತ್ಸವ ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ದಿನೇಶ್ ರೈ ಬಾಳೆಹಿತ್ಲು, ರಕ್ಷಣ್ ರೈ ಬಾಳೆಹಿತ್ಲು, ಬಾಬು ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here