ಸಂಪ್ಯ ದೇವಸ್ಥಾನದ ಕಾಂಕ್ರೀಟಕರಣಗೊಂಡ ರಸ್ತೆ ಉದ್ಘಾಟನೆ

0

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ರಸ್ತೆಗೆ ಶಾಸಕರ  ರೂ.10 ಲಕ್ಷ‌ ಅನುದಾನದಲ್ಲಿ ನಡೆದ ಕಾಂಕ್ರಿಟೀಕರಣವನ್ನು ಜ.25ರಂದು ಉದ್ಘಾಟನೆಗೊಂಡಿತು.


ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆದು ರಸ್ತೆಯನ್ನು ಉದ್ಘಾಟಿಸಿದರು. ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಧ್ಯಕ್ಷ ಡಾ ಸುರೇಶ್ ಪುತ್ತೂರಾಯ ದೀಪ ಬೆಳಗಿಸಿದರು. ಉದ್ಯಮಿ‌ ಶಶಾಂಕ ಕೊಟೇಚಾ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಕ್ತಿ ಕೇಂದ್ರದ ಜಯಂತ ಶೆಟ್ಟಿ ಕಂಬಳತ್ತಡ್ಡ, ಚೇತನಾ ಆಸ್ಪತ್ರೆಯ ಡಾ.ಜೆ.ಸಿ ಅಡಿಗ, ತಂತ್ರಿ ಕುಕ್ಕಾಡಿ ಪ್ರೀತಂ ಪುತ್ತೂರಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ‌ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರು, ಆದ್ಯಕ್ಷರು, ಪದಾಧಿಕಾರಿಗಳು, ಸದಸ್ಯರು‌ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here