ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಥಮ ಜಾತ್ರೋತ್ಸವಕ್ಕೆ ಹೊರೆಕಾಣಿಕೆ

0

ಪುತ್ತೂರು: ಆರ್ಯಾಪು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.26ರಂದು ನಡೆಯಲಿರುವ ದೇವಸ್ಥಾನದ ಪ್ರಥಮ ಜಾತ್ರೋತ್ಸವಕ್ಕೆ ಹಸಿರು ಹೊರೆಕಾಣಿಕೆಯು ಅದ್ದೂರಿ ಮೆರವಣಿಕೆಯೊಂದಿಗೆ ಸಮರ್ಪಣೆಗೊಂಡಿತು.


ದರ್ಬೆ ವೃತ್ತದ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆಗೆ ಶಾಸಕ ಸಂಜೀವ ಮಠಂದೂರು, ಉದ್ಯಮಿ ಶಶಾಂಕ ಕೊಟೇಚಾ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಸದಸ್ಯೆ ಶಶಿಕಲಾ‌‌ ಸಿ.ಎಸ್,‌ನಗರ ಸಭಾ ಮಾಜಿ ಅಧ್ಯಕ್ಷ ಜಗದೀಶ ಶೆಟ್ಟಿ ನೆಲ್ಲಿಕಟ್ಟೆ, ಮಾಜಿ ಸದಸ್ಯ ನವೀನ್ ಚಂದ್ರ ನಾಕ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಉತ್ಸವ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಭೀಮಯ್ಯ ಭಟ್, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಮೊಟ್ಟೆತ್ತಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಾತ್ರೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದರ್ಬೆ ವೃತ್ತದ ಬಳಿಯಿಂದ ಹೊರಟು, ಮುಖ್ಯ ರಸ್ತೆಯ ಮೂಲಕ ಸಾಗಿ ದೇವಸ್ಥಾನದ ಬಳಿಯಲ್ಲಿ ಸಮಾಪನಗೊಂಡಿತು. ಅಂಧ ಕಲಾವಿದರಿಂದ‌ ಚಲಿಸುವ ರಸಮಂಜರಿಯು ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು. ನೂರಾರು ವಾಹನಗಳು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಾಗಿದವು.

LEAVE A REPLY

Please enter your comment!
Please enter your name here