ಕೊಡಿಪ್ಪಾಡಿ: ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ಅಶೋಕ್ ರೈ

0

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಪರಿಸರಕ್ಕೆ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಇಲ್ಲಿನ ನಿವಾಸಿಗಳಿಗೆ 4 ದಿನದಿಂದ ಕುಡಿಯುವ ನೀರು ಸರಬರಾಜು ಇಲ್ಲದೆ ನೀರಿಗಾಗಿ ಪರದಾಡುತ್ತಿದ್ದರು. ಪಂಚಾಯತ್ ಬೊರ್ ವೆಲ್ ಕೆಟ್ಟು ಹೋಗಿ ಜನರಿಗೆ ಸರಬರಾಜು ಸಮಸ್ಯೆ ಆಗಿರುವ ಬಗ್ಗೆ ಮಾಹಿತಿ ಪಡೆದ ಅಶೋಕ್ ಕುಮಾರ್ ರೈ ಅವರು ಕಲ್ಲಂದಡ್ಕ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಟ್ಯಾಂಕರ್ ಮೂಲಕ ಮಾಡಿದರು.

LEAVE A REPLY

Please enter your comment!
Please enter your name here