30ನೇ ವರ್ಷದ ಕೋಟಿಚೆನ್ನಯ ಜೋಡುಕರೆ ಕಂಬಳ- ವಿಶೇಷ ಆಕರ್ಷಣೆಯಾಗಿ ಚಿತ್ರಂಗದ ಸಂಗೀತ ನಿರ್ದೇಶಕರು, ನಟ ನಟಿಯರು ಭಾಗಿ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕೋಟಿಚೆನ್ನಯ ಜೋಡುಕರೆ ಕಂಬಳ ಜ.28ರಂದು ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ. ಸಂಜೆ ಗಂಟೆ 6ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಚಲನಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರು, ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ಕೀರ್ತಿಶೇಷ ಎನ್.ಮುತ್ತಪ್ಪ ರೈ ಅವರ ಸ್ಮರಣೆಯೊಂದಿಗೆ ಕೀರ್ತಿಶೇಷ ಜಯಂತ ರೈ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ನಡೆಯಲಿದೆ. ಸಭಾಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಬಿಗ್‌ಬಾಸ್ ವಿಜೇತ ಚಿತ್ರನಟ ರೂಪೇಶ್ ಶೆಟ್ಟಿ, ನಿರ್ಮಾಪಕ ರವಿ ರೈ ಕಳಸ, ವಿಕ್ರಾಂತ್ ರೋಣ ಖ್ಯಾತಿಯ ನಟ ವಜ್ರದೀರ್ ಜೈನ್, ವಿಕ್ರಾಂತ್ ರೋಣ ಕನ್ನಡ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ, ಡೈಜಿ ವರ್ಲ್ಡ್‌ನ ವಾಲ್ಟರ್ ನಂದಳಿಕೆ, ಖ್ಯಾತ ನಟಿ ಅದಿತಿ ಪ್ರಭುದೇವ, 777 ಚಾರ್ಲಿ ಚಿತ್ರ ನಟಿ ಸಂಗೀತ ಶೃಂಗೇರಿ, ನಟಿ ಸಾನಿಯ ಅಯ್ಯರ್, ನಟ ದೀಪಕ್ ರೈ ಪಾಣಾಜೆರವರು ಕಾಣಿಸಿಕೊಳ್ಳಲಿದ್ದಾರೆ.

ಬಂಜಾರ ಗ್ರೂಪ್ಸ್ ಬೆಂಗಳೂರು ಇದರ ಚೇರ್‌ಮೆನ್ ಪ್ರಕಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, 30ನೇ ವರ್ಷದ ವಿಶೇಷ ಸ್ಮರಣ ಸಂಚಿಕೆಯನ್ನು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಲಿದ್ದಾರೆ. ಅತಿಥಿಗಳಾಗಿ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ಎಐಸಿಸಿ ಕಾರ್ಯದರ್ಶಿ ರೋಝಿ ಜೋನ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಮಧುಬಂಗಾರಪ್ಪ, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here