ಒಡಿಯೂರು ತುಳುನಾಡ ಜಾತ್ರೆ ’ಶ್ರೀ ಒಡಿಯೂರು ರಥೋತ್ಸವ’ಕ್ಕೆ ಪುತ್ತೂರಿನಿಂದ ಹಸಿರುವಾಣಿ ಸಮರ್ಪಣೆ

0

ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜ.30, 31ರಂದು ನಡೆಯಲಿರುವ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವಜ್ರಮಾತ ಸೇವಾ ಬಳಗ, ಗುರುದೇವ ಸೇವಾ ಬಳಗ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಸಿರುವಾಣಿ ಸಮರ್ಪಣೆಯು ಜ.28ರಂದು ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ, ಗುರುದೇವ ಸೇವಾ ಬಳಗದ ಗೌರವಾಧ್ಯಕ್ಷ ದೇವಪ್ಪ ನೋಂಡಾ, ಸೀತಾರಾಮ ರೈ ಸವಣೂರು, ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನಯನಾ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here