ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

0

ಬಡಗನ್ನೂರುಃ  ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಹಾಗೂ ಪೋಷಕರ ವಾರ್ಷಿಕ ಕ್ರೀಡಾಕೂಟ ಜ.26 ರಂದು ನಡೆಯಿತು.


ಕ್ರೀಡಾಕೂಟವನ್ನು  ವಿದ್ಯಾಸಂಸ್ಥೆಯ ಸಂಚಾಲಕರಾದ ನಾರಾಯಣ ಭಟ್ ಬೀರ್ನೋಡಿ   ಉದ್ಘಾಟಿಸಿದ ಡಿ ಮಾತನಾಡಿ, ತಾವು ಕಲಿತ ವಿದ್ಯಾಸಂಸ್ಥೆಯೊಂದಿಗೆ ಸಮನ್ವಯತೆಯನ್ನಿಟ್ಟುಕೊಂಡು ಬೆಂಬಲ ನೀಡುವ ಕೆಲಸವನ್ನು ಹಿರಿಯ ವಿದ್ಯಾರ್ಥಿಗಳು ಮಾಡಬೇಕು. ಆಗ ಸಂಸ್ಥೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷ ವೇಣುಗೋಪಾಲ್ ಭಟ್ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಶಿರೀಶ್ ಪಿ.ಬಿ, ಪ್ರತಿಭಾ ಪ್ರೌಢ ಶಾಲೆ ಹಾಗೂ ಶ್ರೀ ಕೃಷ್ಣ ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬೆಳ್ಳಿಯಪ್ಪ ಗೌಡ ಮತ್ತು ಲಿಂಗಪ್ಪ ಗೌಡ ಮೋಡಿಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ ಪಿ.ಆರ್., ಶ್ರೀ ಕೃಷ್ಣ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕರಾದ ರಾಜಗೋಪಾಲ್, ಪ್ರತಿಭಾ ಪ್ರೌಢ ಶಾಲೆಯ ಮುಖ್ಯಗುರು ಸುಮನಾ, ದೈ.ಶಿ. ಶಿಕ್ಷಕ ಎಂ.ಮೋನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೀತಂ ಪಟ್ಟೆ ಸ್ವಾಗತಿಸಿ, ಶಿಕ್ಷಕರಾದ ವಿಶ್ವನಾಥ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಅನಂತರ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.. 

LEAVE A REPLY

Please enter your comment!
Please enter your name here