ಗಾಂಧೀಕಟ್ಟೆಯಲ್ಲಿ ಹುತಾತ್ಮ ದಿನಾಚರಣೆ

0

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಗಾಂಧೀಕಟ್ಟೆ ಸಮಿತಿಯ ವತಿಯಿಂದ ಹುತಾತ್ಮರ ದಿನಾಚರಣೆಯು ಜ.30ರಂದು ಬಸ್ ನಿಲ್ದಾಣದ ಬಳಿಯ ಗಾಂಧೀ ಕಟ್ಟೆಯಲ್ಲಿ ನಡೆಯಿತು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗಪ್ರಿಯ ಜೆ., ಬೆಟ್ಟಂಪಾಡಿ ಗ್ರಾ.ಪಂ ಸದಸ್ಯೆ ಸುಮಲತ ಗಾಂಧೀ ಪ್ರತಿಮೆಗೆ ಹಾರಾರ್ಪಾಣೆ ಮಾಡಿ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರಿಂದ ಸೈರನ್ ಮೊಳಗಿಸಿ ನಮನ ಸಲ್ಲಿಸಲಾಯಿತು. ಗಾಂಧೀಕಟ್ಟೆ ಸಮಿತಿ ಸೀತಾರಾಮ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು. ಗಾಂಧೀಕಟ್ಟೆ ಸಮಿತಿ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here