ಫೆ.11:ಅಮಿತ್ ಶಾ ಪುತ್ತೂರಿಗೆ ; ತೆಂಕಿಲದಲ್ಲಿ ಬೃಹತ್ ಸಮಾವೇಶ

0

ಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರುಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಂಬಂಧ ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರ ದಂಡೇ ಸಮಾವೇಶಕ್ಕೆ ಆಗಮಿಸಲಿದೆ. ಜೊತೆಗೆ ದ.ಕ.ಮತ್ತು ಹೊರಜಿಲ್ಲೆಯಿಂದಲೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೂ ಹೊಸ ಹುರುಪಿನೊಂದಿಗೆ ಈ ಸಮಾವೇಶದಲ್ಲಿ ಭಾಗವಹಿಸಲಿದ್ದು ಜಿಲ್ಲೆ ಮತ್ತು ರಾಜ್ಯದ ರಾಜಕೀಯ ಚಿತ್ರಣವೇ ಅಮಿತ್ ಶಾ ಭೇಟಿಯಿಂದ ಬದಲಾಗುವ ನಿರೀಕ್ಷೆಯಲ್ಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜು ಮೈದಾನದಲ್ಲಿ ಫೆ.10ರಿಂದ 12ರ ತನಕ ನಡೆಯಲಿರುವ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಕಾರ್ಯಕ್ರಮಕ್ಕೆ ಫೆ.11ರಂದು ಅಮಿತ್ ಶಾ ಅವರು ಆಗಮಿಸಿ, ಕ್ಯಾಂಪ್ರೋ ಯೋಜನೆಗಳಿಗೂ ಡಿಜಿಟಲ್ ಮಾದರಿಯಲ್ಲಿ ಕೃಷಿ ಯಂತ್ರಮೇಳದಲ್ಲಿಯೇ ಚಾಲನೆ ನೀಡುವುದು ಎಂದು ಆರಂಭದಲ್ಲಿ ತೀರ್ಮಾನವಾಗಿತ್ತು. ಆದರೆ ಇದೀಗ, ಅಮಿತ್ ಶಾ ಅವರ ಕಾರ್ಯಕ್ರಮ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.ಕೃಷಿ ಯಂತ್ರ ಮೇಳಕ್ಕೂ ಅವರು ಭೇಟಿ ನೀಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here