ಪುತ್ತೂರು ಕಂಬಳ ಗದ್ದೆಯಲ್ಲಿ ಮೊಬೈಲ್ ನಲ್ಲಿ ಯುವತಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ಯುವಕ- ಪೊಲೀಸರಿಗೊಪ್ಪಿಸಿದ ಹಿಂದು ಸಂಘಟನೆಯ ಕಾರ್ಯಕರ್ತರು !

0

ಪುತ್ತೂರು: ಪುತ್ತೂರಿನ ಕೋಟಿ ಚೆನ್ನಯ ಕಂಬಳ ಗದ್ದೆ ಪರಿಸರದಲ್ಲಿ ಯುವಕನೋರ್ವ ಹಿಂದೂ ಯುವತಿಯ ಫೋಟೋ ತೆಗೆಯುತ್ತಿದ್ದ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಪೊಲೀಸರಿಗೊಪ್ಪಿಸಿದ ಮತ್ತು ವಿಚಾರಣೆ ವೇಳೆ ಆತನ ಮೊಬೈಲ್ ನಲ್ಲೆ ಅನೇಕ ಯುವತಿಯರ ಪೊಟೋ ಇರುವುದು ಬೆಳಕಿಗೆ ಬಂದಿದೆ.

ಕುರಿಯ ಮೂಲದ ಯುವಕ ಎಂದು ವಿಚಾರಣೆ ವೇಳೆ ತಿಳಿದು ಬಂದಿದ್ದು ಈತ ಕಂಬಳದ ಪರಿಸರದಲ್ಲಿ ಯುವತಿಯರ ಪೊಟೋ ತೆಗೆಯುತ್ತಿದ್ದ. ಈ ಸಂದರ್ಭ ಓರ್ವ ಯುವತಿ ಈತ ಪೊಟೋ ಕ್ಲಿಕ್ಕಿಸುವುದನ್ನು ಗಮನಿಸಿ ಅಲ್ಲೇ ಇದ್ದ ಹಿಂದು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ‌ ನೀಡಿದ್ದಳು. ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದಿದ್ದು, ಠಾಣೆಯಲ್ಲಿ ಯುವಕನ ಮೊಬೈಲ್ ಪರಿಶೀಲನೆ ನಡೆಸಿದಾಗ ಇನ್ನು ಹಲವು ಯುವತಿಯರ ಫೋಟೋಗಳು ಮೊಬೈಲ್ ನಲ್ಲಿ ಇರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ, ಯುವಕನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಠಾಣೆಯಿಂದ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here