ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಚೇತರಿಕೆ

0

  • ಸಿ.ಎಂ. ಬೊಮ್ಮಾಯಿ, ಮಾಜಿ ಸಿ.ಎಂ. ಯಡಿಯೂರಪ್ಪ ಸಹಿತ ಹಲವರಿಂದ ಆರೋಗ್ಯ ವಿಚಾರಣೆ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡರೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಮಾಹಿತಿ ಲಭಿಸಿದೆ.

 


ಎ. 5ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಭಾಕರ ಭಟ್ ಅವರಿಗೆ ನಿಶ್ಯಕ್ತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಲೋ ಬಿ.ಪಿ.ಯಿಂದಾಗಿ ನಿಶ್ಯಕ್ತಿ ಕಾಣಿಸಿಕೊಂಡಿರುವುದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ನಂತರ ಹೆಚ್ಚಿನ ಪರೀಕ್ಷೆ ನಡೆಸಿದಾಗ ಪ್ರಭಾಕರ ಭಟ್ ಅವರ ಹೃದಯದಲ್ಲಿ ಮೂರು ಕಡೆ ಸಣ್ಣ ಬ್ಲಾಕ್ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಯಸ್.ಯಡಿಯೂರಪ್ಪ ಸಹಿತ ಬಿಜೆಪಿ ಮತ್ತು ಸಂಘ ಪರಿವಾರದ ಹಲವು ನಾಯಕರು ದೂರವಾಣಿ ಕರೆ ಮಾಡಿ ಪ್ರಭಾಕರ ಭಟ್ ಅವರ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ‌ ಪ್ರಭಾಕರ ಭಟ್ ಅವರೊಂದಿಗೆ ಪತ್ನಿ, ರಾಷ್ಟ್ರೀಯ ಸೇವಿಕಾ ಸಮಿತಿಯ ಮುಂದಾಳು ಡಾ. ಕಮಲಾ ಪ್ರಭಾಕರ ಭಟ್ ಮತ್ತು ಪುತ್ರಿ ಲಕ್ಷ್ಮಿ ಜತೆಗಿದ್ದಾರೆ.
ಎ.6ರಂದು ರಾತ್ರಿ ಡಾ. ಪ್ರಭಾಕರ ಭಟ್ ಆಸ್ಪತ್ರೆಯಿಂದ ಡಿಸ್ಚಾರ್ಸ್ ಆಗುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here