ಆತೂರು: ವರ್ಷಾವಧಿ ಜಾತ್ರೋತ್ಸವ-ದೇವಸ್ಥಾನದ ಲಾಂಛನ ಬಿಡುಗಡೆ

0

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಸಂದರ್ಭದಲ್ಲಿ ಎ.೧1ರಂದು ರಾತ್ರಿ ಮಹಾರಥೋತ್ಸವದ ಬಳಿಕ ಸಭಾ ಕಾರ್ಯಕ್ರಮ, ದೇವಸ್ಥಾನದ ಅಧಿಕೃತ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.

 


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿಯವರು ದೇವಸ್ಥಾನದ ಅಧಿಕೃತ ಲಾಂಛನ ಬಿಡುಗಡೆಗೊಳಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ ಮಾತನಾಡಿ, ದೇವಸ್ಥಾನದ ವತಿಯಿಂದ ಸುಮಾರು 1.50 ಲಕ್ಷ ರೂ.,ವೆಚ್ಚದಲ್ಲಿ ಸುಸಜ್ಜಿತ ಕಲ್ಯಾಣ ಮಂಟಪ ನಿರ್ಮಾಣ ಕೆಲಸ ನಡೆಯುತ್ತಿದೆ. ಮುಂದಿನ ಜಾತ್ರೋತ್ಸವದ ವೇಳೆಗೆ ಕಲ್ಯಾಣ ಮಂಟಪದ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಳಿಸಲು ನಿರ್ಧರಿಸಲಾಗಿದೆ. ಊರ, ಪರವೂರಿನ ಭಕ್ತರು ಆರ್ಥಿಕ ನೆರವು ನೀಡಿ ಸಹಕರಿಸಬೇಕೆಂದು ಹೇಳಿದರು. ಉತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಬುಡಲ್ಲೂರು, ಲಾಂಛನದ ವಿನ್ಯಾಸಕ ಪ್ರದೀಪ್ ಕೊಯಿಲ ಉಪಸ್ಥಿತರಿದ್ದರು. ಉಪನ್ಯಾಸಕ ಚೇತನ್ ಆನೆಗುಂಡಿ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here