ಕೋಡಿಂಬಾಡಿಯಲ್ಲಿ ದುಡಿಯೋಣ ಬಾ ಮತ್ತು ಬಯಲು ಕಸ ಮುಕ್ತ ಗ್ರಾಮ ಅಭಿಯಾನ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನ ಮತ್ತು ಬಯಲು ಕಸ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮ ಎ.7ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ರಾಜಗೋಪಾಲ್, ಗ್ರಾ.ಪಂ. ಅಧ್ಯಕ್ಷ ಕೆ.ರಾಮಚಂದ್ರ ಪೂಜಾರಿ ಶಾಂತಿನಗರ, ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ, ಕಾರ್ಯದರ್ಶಿ ರಮೇಶ್ ಕೆ , ಗ್ರಾ.ಪಂ.ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here