ಈಶ್ವರಮಂಗಲ : ವಿಶ್ವ ಆರೋಗ್ಯ ದಿನದ ಪ್ರಯುಕ್ತ ತಪಾಸಣಾ ಶಿಬಿರ

0

ಈಶ್ವರಮಂಗಲ ಪ್ರಾ. ಆರೋಗ್ಯ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ
ಗರ್ಭಕಂಠ, ರಕ್ತದೊತ್ತಡ. ಮಧುಮೇಹ ಮತ್ತು ದಂತ ತಪಾಸಣಾ ಶಿಬಿರ

ಈಶ್ವರಮಂಗಲ: ವಿಶ್ವ ಆರೋಗ್ಯ ದಿನದ ಪ್ರಯುಕ್ತ ಗರ್ಭಕಂಠ, ರಕ್ತದೊತ್ತಡ, ಮಧುಮೇಹ ಮತ್ತು ದಂತ ತಪಾಸಣಾ ಶಿಬಿರ ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಸರ್ವೇಕ್ಷಣಾ ಘಟಕ ಮಂಗಳೂರು, ಜಸ್ಟಿನ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಈಶ್ವರಮಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಎ.9ರಂದು ನಡೆಯಲಿದೆ. ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ್ ಕುಮಾರ್, ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕೆ., ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಉಪಾಧ್ಯಕ್ಷೆ ಪೌಝಿಯಾ ಇಬ್ರಾಹಿಂ, ಬಡಗನ್ನೂರು ಗ್ರಾ.ಪಂ. ಉಪಾಧ್ಯಕ್ಷ ಸಂತೋಷ್ ಆಳ್ವ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇದರ ಉಪನ್ಯಾಸಕ ತನ್ವಿರ್ ಅಹಮ್ಮದ್ದ ಖಾನ್, ಬೆಂಗಳೂರು ಪಿ.ಜಿ.ಡಿ.ಹೆಚ್.ಪಿ.ಇ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ/ಮಾರ್ಗದರ್ಶಕಿ ಭಾಗ್ಯಲಕ್ಷ್ಮಿ ವಹಿಸಲಿದ್ದಾರೆ ಎಂದು ಪ್ರಾ. ಆ. ಕೇಂದ್ರ ಈಶ್ವರಮಂಗಲದ ವೈದ್ಯಾಧಿಕಾರಿ ಡಾ. ನಿಕಿಲ್ ಕೆಮ್ಮಿಂಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here