ಶಾಂತಿಗೋಡಿನಲ್ಲಿ ಬ್ರಹ್ಮಶ್ರೀ ಕಪ್ ಮುಕ್ತ ಕ್ರಿಕೆಟ್ ಪಂದ್ಯಾಟ

0

ಪುತ್ತೂರು: ಬಿಲ್ಲವ ಗ್ರಾಮ ಸಮಿತಿ ಮತ್ತು ಯುವವಾಹಿನಿ ಶಾಂತಿಗೋಡು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಕಪ್-2022 ಮುಕ್ತ ಕ್ರಿಕೆಟ್ ಪಂದ್ಯಾಟವು ಏ.10 ರಂದು ಶಾಂತಿಗೋಡು ಶಾಲಾ ಮೈದಾನದಲ್ಲಿ ಜರಗಲಿದೆ.

ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ್ ಬಿ.ಎಸ್‌ರವರು ಉದ್ಘಾಟಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಶಾಂತಿಗೋಡು ವಿಕ್ರಂ ಯುವಕ ಮಂಡಲದ ಅಧ್ಯಕ್ಷ ಪ್ರಭಾತ್ ಸಾರಕರೆ, ಶಾಂತಿಗೋಡು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಆಶಾ ಸಚೀಂದ್ರ ಬೊಳ್ಳೆಕ್ಕು, ಬಿಲ್ಲವ ಸಂಘದ ನರಿಮೊಗರು ವಲಯ ಸಂಚಾಲಕರಾದ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್‌ರವರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಸಾರಕರೆ, ಸರೋವರ ಬಾರ್ ಆಂಡ್ ರೆಸ್ಟೋರೆಂಟ್ ಮಾಲಕ ಜಯರಾಮ ಪೂಜಾರಿ ಬಾಳೆಕಲ್ಲು, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅನೂಪ್ ಕುಮಾರ್ ಎಸ್, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಸುಧೀರ್ ಶೆಟ್ಟಿ ಕುದ್ರೆಪ್ಪಾಡಿ, ಶಾಂತಿಗೋಡು ವಿಕ್ರಂ ಯುವಕ ಮಂಡಲದ ಕಾರ್ಯದರ್ಶಿ ವರುಣ್ ಗೌಡ ಓಲಾಡಿ, ಪುಣ್ಯಕೋಟಿ ಗೂಡ್ಸ್ ಮತ್ತು ಸರ್ವಿಸಸ್‌ನ ಮಾಲಕ ಜಗದೀಶ್ ಪರಕಮೆರವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here