ವಿಟ್ಲ: ತೆಂಗಿನ ಕಾಯಿ ತೆಗೆಯುತ್ತಿದ್ದ ವೇಳೆ  ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

0

ವಿಟ್ಲ; ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ  ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

 ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್ (54 ವ.) ಮೃತ ದುರ್ದೈವಿ. ತಮ್ಮ ಮನೆಯ ತೋಟದ ಕೆರೆಯ ಬದಿಯಲ್ಲಿದ್ದ ತೆಂಗಿನಕಾಯಿಯನ್ನು ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ಮನೆಯಿಂದ ತೋಟದ ಕಡೆಗೆ ಹೊರಟ ಹಮೀದ್ ರವರು ಹೊತ್ತು ಹಲವಾದರೂ  ಮನೆಗೆ ಬಾರದ ಹಿನ್ನಲೆ ಮನೆಯವರು ತೋಟಕ್ಕೆ ಹುಡುಕಿಕೊಂಡು ಹೋದಾಗ  ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ ಮತ್ತು 4 ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here