ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನ – ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

0

ವಿಟ್ಲ: ಮಹಿಳೆಯೋರ್ವರನ್ನು ಅವರ ಮೈದುನ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವೀರಕಂಭ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ‌.

 

 ವೀರಕಂಭ ಮೈರ ನಿವಾಸಿ ಜನಾರ್ಧನ ಪ್ರಕರಣದ ಆರೋಪಿ ಎಂದು  ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಹಿಳೆಯ ಗಂಡನ ದೊಡ್ಡಪ್ಪನ ಮಗನಾಗಿದ್ದು, ಮಹಿಳೆಯ ಮನೆಯ ಪಕ್ಕದಲ್ಲೇ ವಾಸಮಾಡುತ್ತಿದ್ದನೆನ್ನಲಾಗಿದೆ.

 ಫೆ.25 ರಂದು ಬೆಳಗ್ಗೆ ನನ್ನ ಗಂಡ ದನದ ಕೊಟ್ಟಿಗೆಗೆ ಸೊಪ್ಪು ತರಲು ಗುಡ್ಡಕ್ಕೆ ಹೋಗಿದ್ದು, ನಾನೂ ಮನೆ ಕೆಲಸ ಮುಗಿಸಿ ಗುಡ್ಡಕ್ಕೆ ಹೋಗಿ, ಗಂಡ ಕತ್ತರಿಸಿದ್ದ ಸೊಪ್ಪನ್ನು ತರುತ್ತಿದ್ದ ವೇಳೆ ಗುಡ್ಡದಲ್ಲಿ ಅಡ್ಡಗಟ್ಟಿದ ಜನಾರ್ಧನ ಕೈ ಹಿಡಿದು ಎಳೆದು, ಒಂದು ಕೈಯಿಂದ ಬಾಯಿಯನ್ನು ಮುಚ್ಚಿ ಮಾನಭಂಗ ಯತ್ನಿಸಿದ್ದು,  ಆತನಿಂದ ಬಿಡಿಸಿಕೊಂಡು ಗಂಡನನ್ನು ಕರೆದಾಗ, ನನ್ನ ಗಂಡ ಹಾಗೂ ಮತ್ತಿತರರು ಬರುವುದನ್ನು ಗಮನಿಸಿದ ಆತ  ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಮಹಿಳೆ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here