![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು : ಗೆಜ್ಜೆಗಿರಿ ಕ್ಷೇತ್ರದಲ್ಲಿ ಫೆ.19ರಂದು ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಮಾತೆ ದೇಯಿ ಬೈದೆದಿ ಸಾನಿಧ್ಯದಲ್ಲಿ ಹಾಗೂ ಕ್ಷೇತ್ರದ ಸರ್ವಶಕ್ತಿಗಳ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸತ್ಯಧರ್ಮ ಚಾವಡಿಯ ಮುಂಭಾಗದಲ್ಲಿ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಕ್ಷೇತ್ರದ ಮೊಕ್ತೇಸರರಾದ ಶ್ರೀಧರ ಪೂಜಾರಿ, ಕ್ಷೇತ್ರ ಆಡಳಿತ ಸಮಿತಿ ಗೌರವಾಧ್ಯಕ್ಷ ಜಯಂತ್ ನಡುಬೈಲು, ನೇಮೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯಾಧ್ಯಕ್ಷ ಉದಯ ಅಮೀನ್ ಮಟ್ಟು, ಪ್ರಧಾನ ಕಾರ್ಯದರ್ಶಿ ಜನಾರ್ದನ ಪೂಜಾರಿ ಪದಡ್ಕ, ಉಪಾಧ್ಯಕ್ಷ ಹರೀಶ್ ಕೆ. ಪೂಜಾರಿ, ಕ್ಷೇತ್ರ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕ್ಷೇತ್ರದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.