ಪುತ್ತೂರು ಮೂಲದ ನಿಧಿ ಬಿ. ಯನ್‌ಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಯಲ್ಲಿ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿ

0

 

ಪುತ್ತೂರು: ಕಲಬುರುಗಿಯಲ್ಲಿರುವ ಪೊಲೀಸ್ ತರಬೇತಿ ಮಹಾವಿದ್ಯಾಲಯ ನಡೆದ 11 ತಿಂಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಯ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪುತ್ತೂರಿನ ಮೂಲದ ಬೊಟ್ಯಾಡಿ ನಿಧಿ ಬಿ.ಯನ್ ಅವರಿಗೆ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಲಭಿಸಿದೆ.

ಫೆ.19ರಂದು ಕಲಬುರುಗಿಯಲ್ಲಿ ನಡೆದ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅತ್ಯುತ್ತಮ ಆಲ್-ರೌಂಡರ್ ಪ್ರಶಸ್ತಿಯನ್ನು ವಿತರಿಸಿದರು. ಗೌರವದ ಸಂಕೇತವಾಗಿ ನಿಧಿಯವರಿಗೆ ಖಡ್ಗ ಮತ್ತು ಪ್ರಶಸ್ತಿಯನ್ನು ನೀಡಿರುತ್ತಾರೆ. ಇದರಿಂದ ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣೆ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಈ ತರಬೇತಿಯಲ್ಲಿ ಮಹಿಳಾ ಮತ್ತು ಪುರುಷರು ಒಟ್ಟು 288ಜನ ಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಕುಮಾರಿ ನಿಧಿ ಬಿ ಯನ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೊಟ್ಯಾಡಿಯವರ ಸಹೋದರ ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ನಾರಾಯಣ್ ಭಂಡಾರಿ ಬೊಟ್ಯಾಡಿ ಮತ್ತು  ಯಶೋಧರವರ ಪುತ್ರಿ.

 

 

 

LEAVE A REPLY

Please enter your comment!
Please enter your name here