ಕಡಬ: ಬಿಎಸ್‌ಎಫ್ ಯೋಧನ ತಾಯಿಯನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ಮನವಿ

0

ಕಡಬ: ಭಾರತೀಯ ಅರೆಸೇನಾ ಪಡೆಯಲ್ಲಿ ಸೇವೆಯಲಿರುವ ರಾಯಚೂರು ಜಿಲ್ಲೆಯ ಯೋಧ ಅಮರೇಶ್ ಅವರ ಮೇಲೆ ನಡೆದಿರುವ ಹಲ್ಲೆ ಹಾಗೂ ಅಮರೇಶ್ ಅವರ ತಾಯಿಯ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲೂಕು ಘಟಕದ ಅಧ್ಯಕ್ಷ ಜೆ.ಪಿ.ಎಂ ಚೆರಿಯನ್ ಅವರ ನೇತೃತ್ವದಲ್ಲಿ ಕಡಬ ತಹಶೀಲ್ದಾರ್ ಮೂಲಕ ರಾಜ್ಯ ಪಾಲರಿಗೆ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

 

ದೇಶದ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಾ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರಿಗೆ ಮತ್ತು ಮಾಜಿ ಸೈನಿಕರಿಗೆ ಹಾಗೂ ಸೈನಿಕರ ಕುಟುಂಬದವರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಮನವಿ ನೀಡುವ ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here