ಹಾರಾಡಿ ಬೈಕ್, ಕಾರು ಡಿಕ್ಕಿ – ಬೈಕ್ ಸವಾರನಿಗೆ ತೀವ್ರ ಗಾಯ

0

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ಮಾ.9ರಂದು ನಡೆದಿದ್ದು, ಬೈಕ್ ಸವಾರ ಹಾರಾಡಿ ಮೂಕಾಂಬಿಕಾ ಗ್ಯಾಸ್ ಏಜೆನ್ಸಿಯಲ್ಲಿರುವ ದೇವಿಪ್ರಸಾದ್(33ವ) ಎಂಬವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕೆಮ್ಮಾಯಿ ಬಡಾವು ಗಿರಿಯಪ್ಪ ಪೂಜಾರಿ ಅವರ ಪುತ್ರ ದೇವಿಪ್ರಸಾದ್ ಅವರು ಹಾರಾಡಿ ಮೂಕಾಂಬಿಕಾ ಗ್ಯಾಸ್ ಏಜೆನ್ಸಿಯಿಂದ ಬೈಕ್ ಸವಾರಿ ಮಾಡಿಕೊಂಡು ಕೃಷ್ಣನಗರ ಕಡೆ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಪ್ರದೀಪ್ ಎಂಬವರು ಚಲಾಯಿಸುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ದೇವಿಪ್ರಸಾದ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಕುರಿತು ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

LEAVE A REPLY

Please enter your comment!
Please enter your name here