ನಾಣಿಲ ಪಂಚಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0

 

 

ಕಾಣಿಯೂರು: ಕಡಬ ತಾಲೂಕು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯದ ನಾಣಿಲ ಕಾರ್ಯಕ್ಷೇತ್ರದ ಪಂಚಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಕಡಬ ತಾಲೂಕು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಮೇದಪ್ಪ ನಾವೂರು ಉದ್ಘಾಟಿಸಿ ಶುಭಹಾರೈಸಿದರು. ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಭಾಗೀರಥಿ ಕುಂಬ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ್ತಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷೆ ಚಂದ್ರಕಲಾ ಸಿ.ಜೆ ಅರುವಗುತ್ತು, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನಾಣಿಲ ಒಕ್ಕೂಟದ ಅಧ್ಯಕ್ಷ ಕೇಶವ ಖಂಡಿಗ, ವಲಯ ಮೇಲ್ವೀಚಾರಕ ರವಿ, ಜ್ಞಾನವಿಕಾಸ ಸಮನ್ವಯಧಿಕಾರಿ ಶಿಲ್ಪ, ಕಾಣಿಯೂರು ಗ್ರಾ.ಪಂ.ಸದಸ್ಯರಾದ ಗಂಗಮ್ಮ ಗುಜ್ಜರ್ಮೆ, ಕೀರ್ತಿ ಕುಮಾರಿ ಅಂಬುಲ ಉಪಸ್ಥಿತರಿದ್ದರು. ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಸಹಾಯಕಿ ಸರಸ್ವತಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ರೇಖಾ ಸ್ವಾಗತಿಸಿ, ಸೇವಾಪ್ರತಿನಿಧಿ ಲೀಲಾವತಿ ವಂದಿಸಿದರು. ಜ್ಞಾನವಿಕಾಸ ಸಂಯೋಜಕಿ ವಿಜಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here