ನೇತ್ರಾವತಿ ಅಟೋ ರಿಕ್ಷಾ ಚಾಲಕ ಸಂಘದವರಿಂದ ಕೊಡುಗೆ

0

ಉಪ್ಪಿನಂಗಡಿ: ಗಣರಾಜೋತ್ಸವದಂಗವಾಗಿ ಉಪ್ಪಿನಂಗಡಿ ನೇತ್ರಾವತಿ ಅಟೋ ರಿಕ್ಷಾ ಚಾಲಕ ಮಾಲಕ- ಸಂಘದ ವತಿಯಿಂದ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ಸಿಲ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಇಲ್ಲಿನ ಪುಳಿತ್ತಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ ಮತ್ತು ಪೆನ್ಸಿಲ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ನರಸಿಂಹ ಶೆಟ್ಟಿ ಕಜೆಕ್ಕಾರ್, ಪ್ರಧಾನ ಕಾರ್ಯದರ್ಶಿ ಫಾರೂಕ್ ಝಿಂದಗಿ, ಉಪಾಧ್ಯಕ್ಷರಾದ ಕಲಂದರ್ ಶಾಫಿ, ಜೊತೆ ಕಾರ್ಯದರ್ಶಿ ಅಶೋಕ್ ಬಂಡಾಡಿ, ಕೋಶಾಧಿಕಾರಿ ಚಂದ್ರಶೇಖರ ಪುಳಿತ್ತಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಮಜೀದ್ ರಾಮನಗರ, ಹೇಮಂತ್ ಕುಮಾರ್ ಮೈತ್ತಳಿಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here