ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರು ಮತ್ತು ಲಯನ್ಸ್ ಕ್ಲಬ್ ಆಲಂಕಾರು ಇದರ ಜಂಟಿ ಆಶ್ರಯದಲ್ಲಿ ನಡೆದ ಗಣರಾಜ್ಯೋತ್ಸವ

0

ಆಲಂಕಾರು: ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರು ಮತ್ತು ಲಯನ್ಸ್ ಕ್ಲಬ್ ಆಲಂಕಾರು ಇದರ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜರೋಹಣ ಹಾಗು ಡಾ.ಬಿ.ಆರ್.ಅಂಬೆಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ಆಲಂಕಾರು ಲಯನ್ಸ್ ಕ್ಲಬ್ ಅಧ್ಯಕ್ಷರು ಹಾಗು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸಂವಿಧಾನ ರಚನೆಯ ವಿವಿಧ ಹಂತಗಳು, ಸಂವಿಧಾನದ ಮಹತ್ವ ಮತ್ತು ಸಂವಿಧಾನದಲ್ಲಿ ಅಡಕವಾಗಿರುವ ಆದರ್ಶಗಳನ್ನು ಪಾಲಿಸುವಂತೆ ತಿಳಿಸಿ ವಿಧ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಸದಸ್ಯರಾದ ರಾಮರಾಜ ನಗ್ರಿ, ಇಂದುಶೇಖರ ಶೆಟ್ಟಿ ಕುಕ್ಕೇರಿ, ಆಲಂಕಾರು ಲಯನ್ಸ್ ಕ್ಲಬ್ ಕೋಶಾಧಿಕಾರಿ ಕಿರಣ್ ಪಜ್ಜಡ್ಕ, ಹಾಗು ಸದಸ್ಯರು ಮತ್ತು ಆಲಂಕಾರು ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರೈ ಮನವಳಿಕೆ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜಗೋಪಾಲ್, ಕರಾಟೆ ಶಿಕ್ಷಕರಾದ ಶೇಖರ, ಪ್ರಾಂಶುಪಾಲರಾದ ನವೀನ್ ರೈ, ಮುಖ್ಯಗುರುಗಳಾದ ಶ್ರೀಪತಿ ರಾವ್, ಬೋಧಕ ಬೋಧಕೇತರ ವೃಂದದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here