ಬೊಲೆರೋ, ಬೈಕ್ ಡಿಕ್ಕಿ – ಸವಾರನಿಗೆ ಗಾಯ

0

ಪುತ್ತೂರು: ಬೊಲೆರೋ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಾಲ್ಮರ ಕೊಟೇಚಾ ಹಾಲ್ ಬಳಿ ಜ.29ರಂದು ಸಂಜೆ ನಡೆದಿದೆ. ಉದಯ ಕುಮಾರ್ ಎಂಬವರು ಎಪಿಎಂಸಿ ಕಡೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೊಲೆರೋ ವಾಹನ ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಸಾಲ್ಮರ ಕೊಟೇಚಾ ಹಾಲ್ ಬಳಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಬನ್ನೂರು ಆನೆಮಜಲು ನಿವಾಸಿ ಗಂಗಾಧರ(46ವ)ರವರು ರಸ್ತೆಗೆ ಎಸೆಯಲ್ಪಟು ಗಾಯಗೊಂಡಿದ್ದಾರೆ. ಗಾಯಾಳು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here