ಪುತ್ತೂರು ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್‌ರಿಗೆ ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ಪ್ರದಾನ

0

ಪುತ್ತೂರು: ಕರ್ನಾಟಕ ಪಶು ವೈದ್ಯಕೀಯ ಸಂಘದಿಂದ ಕೊಡಮಾಡುವ ಶ್ರೇಷ್ಠ ಪಶು ವೈದ್ಯ ಪ್ರಶಸ್ತಿಗೆ ಪುತ್ತೂರು ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಹೆಬ್ಬಾರ್ ಅವರು ಭಾಜನರಾಗಿದ್ದು, ಜ.28ರಂದು ಬೆಂಗಳೂರಿನಲ್ಲಿ ನಡೆದ ಕಾನ್ಫರೆನ್ಸ್‌ನಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.


ಪಶು ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದಿಂದ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಕರ್ನಾಟಕ ಪಶು ವೈದ್ಯಕೀಯ ಸಂಘದಿಂದ ಬೆಂಗಳೂರಿನ ಜಿ.ಕೆ.ವಿ.ಕೆ ಕೃಷಿ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಕಾನ್ಪರೆನ್ಸ್‌ನಲ್ಲಿ ಕೇಂದ್ರ ಸಂಘದ ಅಧ್ಯಕ್ಷ ಡಾ. ಎಸ್.ಪಿ ಸುರೇಶ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶಿವರಾಮ್, ನಿರ್ದೇಶಕ ಡಾ. ಮಂಜುನಾಥ್ ಪಾಲೆಗಾರ್ ಸಹಿತ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here