ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ : ರಾಮಕುಂಜದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಶಮೀಮಾ ಬಾನು ಅವರು 17 ರ ವಯೋಮಿತಿಯ ಬಾಲಕಿಯರ ವಿಭಾಗದ ಗುಂಡು ಎಸೆತ ಹಾಗೂ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ನೆಕ್ಕರೆ ನಿವಾಸಿ ಆದಂ ಹಾಗೂ ಅಲಿಮಮ್ಮ ದಂಪತಿ ಪುತ್ರಿ.

8 ನೇ ತರಗತಿಯ ವಿದ್ಯಾರ್ಥಿ ಚರಣ್ ಅವರು 14ರ ವಯೋಮಿತಿಯ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಕೊಯಿಲ ಕೆ.ಸಿ.ಫಾರ್ಮ್ ಧರ್ಣಪ್ಪ ಗೌಡ ಹಾಗೂ ಜಯಂತಿ ದಂಪತಿಯ ಪುತ್ರ. ರಾಜ್ಯಮಟ್ಟದ ಕ್ರೀಡಾಕೂಟ ಮಧುಗಿರಿಯಲ್ಲಿ ನಡೆಯಲಿದೆ. ಇವರಿಗೆ ಶಾಲೆಯ ಮುಖ್ಯಗುರು ಸತೀಶ್ ಭಟ್ ರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here