ನೆಲ್ಯಾಡಿ: ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ

0

ನೆಲ್ಯಾಡಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಕ್ರಾಸ್ ನಿವಾಸಿ ಅಂತೋನಿ ಡಿʼಸೋಜ(59ವ.) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಅಂತೋನಿ ಡಿʼಸೋಜ ಅವರಿಗೆ ಪ್ಯಾರಲೈಸಿಸ್ ಮತ್ತು ಕಣ್ಣು ಕಾಣದ, ಕಿವಿ ಕೇಳದ ಸಮಸ್ಯೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದರಿಂದ ಅವರು ಚೇತರಿಸಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಅವರು ಫೆ.1ರಂದು ಬೆಳಿಗ್ಗೆ ಮನೆಯ ಕೋಣೆಯೊಳಗೆ ಗೋಡೆಗೆ ಹಾಕಲಾಗಿದ್ದ ತೆಂಗಿನ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here