ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿ: ದ್ವಿಚಕ್ರ ಸವಾರರು ಗಂಭೀರ

0

ಉಪ್ಪಿನಂಗಡಿ: ಗೂಡ್ಸ್ ರಿಕ್ಷಾವೊಂದರ ಹಿಂಬದಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಫೆ.1ರ ಸಂಜೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾ.ಪಂ. ವ್ಯಾಪ್ತಿಯ ಶಿವಗಿರಿ ಜಂಕ್ಷನ್ ಬಳಿ ನಡೆದಿದೆ.


ಗಾಯಗೊಂಡವರನ್ನು ದ್ವಿಚಕ್ರ ವಾಹನ ಸವಾರರಾದ ಅಬೂಬಕ್ಕರ್ ಸಿದ್ದೀಕ್ ಹಾಗೂ ಮುಹಮ್ಮದ್ ಕಲೀಲ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಕುಪ್ಪೆಟ್ಟಿಯವರಾಗಿದ್ದು, ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರಣ ರಸ್ತೆಗೆಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here