ಎಲಿಯ: ರಬ್ಬರ್ ತೋಟಕ್ಕೆ ಬೆಂಕಿ, ಅಪಾರ ನಷ್ಟ

0

ಪುತ್ತೂರು: ರಬ್ಬರ್ ತೋಟಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ಫೆ.02 ರಂದು ಮಧ್ಯಾಹ್ನ ಸರ್ವೆ ಗ್ರಾಮದ ಎಲಿಯ ಅಜ್ಜಿಕಲ್ಲು ಗುಡ್ಡೆ ಎಂಬಲ್ಲಿಂದ ವರದಿಯಾಗಿದೆ. ಅಂಗಡಿ ಖಾದರ್ ಎಂಬವರ ರಬ್ಬರ್ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹಲವು ಮರಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಬಿದ್ದಿದ್ದು ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮುಂಡೂರು ಗ್ರಾ.ಪಂ ಸದಸ್ಯ ಕರುಣಾಕರ ಗೌಡ ಎಲಿಯರವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here