ಫೆ.11ರೊಳಗೆ ಟ್ರಾಫಿಕ್ ಫೈನ್ ಕಟ್ಟಿದರೆ 50% ರಿಯಾಯಿತಿ ಘೋಷಣೆ

0

ಬೆಂಗಳೂರು:ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್‌ನಲ್ಲಿ ಇದ್ದರೆ ಫೆ.11ರೊಳಗೆ ದಂಡ ಕಟ್ಟಿದರೆ ಶೇ.50 ರಿಯಾಯಿತಿ ನೀಡಲಾಗುವುದು ಎಂದು ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಕುರಿತು ಮನವಿ ಮಾಡಿಕೊಂಡಿದ್ದು, ಈ ಹಿನ್ನಲೆಯಲ್ಲಿ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಫೆ.11ರೊಳಗೆ ಟ್ರಾಫಿಕ್ ಫೈನ್ ಕಟ್ಟುವವರಿಗೆ ಮಾತ್ರ ಇದು ಅನ್ವಯವಾಗಲಿದೆ. ಈ ಮೂಲಕ, ನಿಗದಿತ ದಿನಾಂಕದೊಳಗೆ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರು ಮುಂದಿನ ಕಾನೂನಿನ ಕುಣಿಕೆಯಿಂದ ಬಚಾವ್ ಆಗಲು ಇದು ಅವಕಾಶವನ್ನು ನೀಡಿದೆ. ಫೆ.11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here