ಅಮಿತ್‌ ಶಾ ಭೇಟಿ ಹಿನ್ನೆಲೆ: ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಡಿ.ಸಿ, ಎಸ್ಪಿ ಪರಿಶೀಲನೆ

0

ಪುತ್ತೂರು: ಕೇಂದ್ರ ಗೃಹ ಸಚಿವರೂ ಆಗಿರುವ ಸಹಕಾರಿ ಸಚಿವ ಅಮಿತ್‌ ಶಾರವರು ಫೆ.11ರಂದು ಕ್ಯಾಂಪ್ಕೋದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌ ತೆಂಕಿಲ ವಿವೇಕಾನಂದ ಶಾಲೆಯ ಮೈದಾನ ಪರಿಶೀಲನೆ ಬಳಿಕ ಅಮಿತ್ ಶಾ ಅವರು ಹೆಲಿಕಾಫ್ಟರ್ ನಲ್ಲಿ ಇಳಿಯುವ ಸ್ಥಳವಾದ ಸಂತ ಫಿಲೋಮಿನಾ ಕಾಲೇಜಿನ‌ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೈದಾನದಲ್ಲಿ ಹೆಲಿಕಾಫ್ಟರ್ ಇಳಿಯುವ ಎರಡು ಸ್ಥಳ. ಎರಡು ದಾರಿಗಳನ್ನು ಗುರುತಿಸಿ ಅದನ್ನು ಸರಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಎಸ್ಪಿ ಡಾ.ಅಮಟೆ ವಿಕ್ರಮ್‌, ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಸಂತ ಪಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಆ್ಯಂಟನಿ ಪ್ರಕಾಶ್ , ಮುಗೆರೋಡಿ ಕನ್‌ಸ್ಟ್ರಕ್ಷನ್ ನ ಇಂಜಿನಿಯರ್ ದಾಮೋದರ್ ಜೊತೆಗಿದ್ದರು.

LEAVE A REPLY

Please enter your comment!
Please enter your name here