ಫೆ.5: ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ನಿರಂತರವಾಗಿ ಕಳೆದ ಹತ್ತು ತಿಂಗಳಿನಿಂದ ವಿಶೇಷ ಚಿಕಿತ್ಸೆಗಳನ್ನು ಜೋಡಿಸಿಕೊಂಡು ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿರುವ ಸಂಪ್ಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ 11 ನೇ ತಿಂಗಳ ಶಿಬಿರವು ಫೆ.5ರಂದು ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಭಾಗವಹಿಸುವ ವೈದ್ಯರು:

ಮಕ್ಕಳ ತಜ್ಞರಾದ ಡಾ.ಮಂಜುನಾಥ ಶೆಟ್ಟಿ, ಡಾ.ಶ್ರೀದೇವಿ ವಿಕ್ರಮ್, ಎಲುಬು ತಜ್ಞ ಡಾ.ಸಚಿನ್ ಶಂಕರ್ ಹಾರಕರೆ, ಶ್ವಾಸಕೋಶ ತಜ್ಞ ಡಾ.ಪ್ರೀತಿರಾಜ್ ಬಲ್ಲಾಳ್, ವೈದ್ಯಕೀಯ ತಜ್ಞ ಡಾ.ಸುರೇಶ್ ಪುತ್ತೂರಾಯ, ಆಯುರ್ವೇದ ತಜ್ಞರಾದ ಡಾ.ವೇಣುಗೋಪಾಲ್, ಡಾ.ಸಾಯಿಪ್ರಕಾಶ್ ಹಾಗೂ ಡಾ.ದೀಕ್ಷಾ ಶಿಬಿರಕ್ಕೆ ಆಗಮಿಸಿ ಚಿಕಿತ್ಸೆ ನೀಡಲಿದ್ದಾರೆ.

ಈ ಬಾರಿಯ ಶಿಬಿರದಲ್ಲೇನಿದೆ:

ಈ ಬಾರಿಯ ಶಿಬಿರದಲ್ಲಿ ಹೃದ್ರೋಗ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಮಕ್ಕಳ ಚಿಕಿತ್ಸೆ, ತಜ್ಞ ವೈದ್ಯರಿಂದ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಆರೋಗ್ಯ ಇಲಾಖೆಯಿಂದ ಕೋವಿಡ್ ಬೂಸ್ಟರ್ ಡೋಸ್ ಹಾಗೂ ಉಚಿತ ಔಷಧಿಗಳ ವಿತರಣೆಯು ಲಭ್ಯವಿದೆ.

ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಲಿದ್ದಾರೆ. ಶಿಬಿರವು ಬೆಳಿಗ್ಗೆ 8.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ. ಶ್ರೀದೇವರ ಭಕ್ತಾದಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆರೋಗ್ಯ ರಕ್ಷಾ ಸಮಿತಿ ಮತ್ತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here