ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಧಾ ಬಿ. ರೈ ಅಧಿಕಾರ ಸ್ವೀಕಾರ

0

ಸಂಸ್ಥೆಯನ್ನು ಉನ್ನತ ಸ್ಥಾನಕ್ಕೇರಿಸುವಲ್ಲಿ ಎರ ಸಹಕಾರ ಅಗತ್ಯ-ಈಶ್ವರ ಭಟ್

ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಧಾ ಬಿ ರೈಯವರು ಅಧಿಕಾರ ಸ್ವೀಕರಿಸಿದರು. ಸಂಘದ ಸಭಾಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ರವರು ಖಜಾನೆಯ ಕೀಯನ್ನು ರಾಧಾ ಬಿ. ರೈಯವರಿಗೆ ಹಸ್ಥಾಂತರಿಸುವ ಮೂಲಕ ಅಧಿಕಾರ ಸ್ವೀಕಾರ ನಡೆಯಿತು.

ಪಂಜಿಗುಡ್ಡೆ ಈಶ್ವರ ಭಟ್‌ರವರು ಮಾತನಾಡಿ ಗೋಪಾಲಕೃಷ್ಣ ಭಟ್‌ರವರು ತಮ್ಮ ಕೆಲಸಕಾರ್ಯಗಳ ಮೂಲಕ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ರಾಧಾ ಬಿ.ರೈರವರೂ ಎಲ್ಲ ಸದಸ್ಯರ ಪ್ರೀತಿ ವಿಶ್ವಾಸ ಗಳಿಸುವ ಮೂಲಕ ಸಂಸ್ಥೆಯನ್ನು ಉನ್ನತ ಸ್ಥಾನಕ್ಕೇರಿಸುವಲ್ಲಿ ಸಹಕಾರಿಯಾಗಬೇಕು ಎಂದು ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು. ಉಪಾಧ್ಯಕ್ಷ ರಾಜಶೇಖರ ಜೈನ್ ಮಾತನಾಡಿ ಶುಭಹಾರೈಸಿದರು.
ಸಂಸ್ಥೆಯ ನೂತನ ಮೆನೇಜರ್ ಆಗಿ ಸಿಬಂದಿ ಪುರಂದರರವರು ಅಧಿಕಾರ ಸ್ವೀಕರಿಸಿದರು.


ನಿರ್ದೇಶಕರುಗಳಾದ ಸುಭಾಷ್ ನಾಯಕ್, ಸುಂದರ ಪೂಜಾರಿ ಬಡಾವು, ಜಯಲಕ್ಷ್ಮಿ ಸುರೇಶ್, ಸುಬ್ರಹ್ಮಣ್ಯ ಗೌಡ ಹನಿಯೂರು, ಮೆನೇಜರ್ ಪುರಂದರ, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮಾತನಾಡಿ ಶುಭಹಾರೈಸಿದರು. ನಿರ್ದೇಶಕ ಮೋಹನ ಪಕ್ಕಳ ಕುಂಡಾಪು ಸ್ವಾಗತಿಸಿದರು.

LEAVE A REPLY

Please enter your comment!
Please enter your name here