ಒಕ್ಕಲಿಗ ಗೌಡ ಸೇವಾ ಸಂಘದ ಮಾಸಿಕ ಸಭೆ – ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಮಾಸಿಕ ಸಭೆಯು ಫೆ.5 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಸಂಘದ ಕಚೇರಿಯಲ್ಲಿ ನಡೆಯಿತು.


ಸಂಘದ ಉಪಾಧ್ಯಕ್ಷ ಸಂಜೀವ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಕ್ಕೆ ಬಂದ ಮನವಿಯಂತೆ ಸಮಾಜ ಬಾಂಧವ ಶಶಿಕಲಾ ಅವರ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವನ್ನು ಅವರ ಪುತ್ರಿಯರ ಮೂಲಕ ನೀಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಸುಂದರ ಗೌಡ, ಉಪಾದ್ಯಕ್ಷ ರವಿ‌ ಮುಂಗ್ಲಿಮನೆ, ಕಾರ್ಯದರ್ಶಿ ಸುರೇಶ್ ಗೌಡ,ದಯಾನಂದ ಕೆ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ್ ಗೌಡ ಕಣಜಾಲು, ಕೋಶಾಧಿಕಾರಿ ಲಿಂಗಪ್ಪ ಗೌಡ, ಒಕ್ಕಲಿಗ ಸ್ವ ಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ, ಪುತ್ತೂರು ವಲಯ ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಉಪಸ್ಥಿತರಿದ್ದರು. ಇತ್ತೇಚೆ ನಿಧನರಾದ ಸಂಘದ ಸದಸ್ಯ ಮಾಜಿ ಸೈನಿಕ ಪೊನ್ನಪ್ಪ ಗೌಡ ಅವರಿಗೆ ಶ್ರದ್ಧಾಂಜಲಿ ನಡೆಸಲಾಯಿತು.

LEAVE A REPLY

Please enter your comment!
Please enter your name here